F5 India News General News Health J. JOHN PREM EDITOR Karnataka News political

ಬೆಂಗಳೂರಿನಲ್ಲಿ ದೀಪಾವಳಿಗೆ ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ `ಪಟಾಕಿ’ ಸಿಡಿಸಲು ಅವಕಾಶ

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಮತ್ತು ಅವುಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿರುತ್ತದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ದಿನಾಂಕ: 31/10/2024 ರಿಂದ 02/11/2024ರವೆಗೆ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. […]