ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್ನ ಪ್ರಯೋಜನವನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ಸಹಕಾರ ಅತ್ಯಗತ್ಯ -ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್
ಬೆಂಗಳೂರು, ಸೆಪ್ಟೆಂಬರ್ 20 (ಕರ್ನಾಟಕ ವಾರ್ತೆ): ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್ನ ಪ್ರಯೋಜನವನ್ನು ಜನಪ್ರಿಯಗೊಳಿಸುವುದು ಅತೀ ಅವಶ್ಯಕವಾಗಿದೆ. ಆದ್ದರಿಂದ ಲೋಕ್ ಆದಾಲತ್ಗಳ ಪ್ರಯೋಜನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರೆ, ಇನ್ನೂ ಅನೇಕ ಕಕ್ಷಿದಾರರಿಗೆ ಖಂಡಿತವಾಗಿಯೂ ಪ್ರಯೋಜನವಾಗುತ್ತದೆ. ಇದಕ್ಕೆ ಮಾಧ್ಯಮಗಳ ಸಹಕಾರ ಅತ್ಯಗತ್ಯವಾಗಿರುವುದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್ ತಿಳಿಸಿದರು. ಬೆಂಗಳೂರಿನ ಕರ್ನಾಟಕ ಉಚ್ಛ ನ್ಯಾಯಾಲಯದ ಮೊದಲನೆಯ ಮಹಡಿಯ ಕಾರ್ಯನಿರ್ವಾಹಕ ಅಧ್ಯಕ್ಷರ ಸಭೆಯ ಸಭಾಂಗಣದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ದಿನಾಂಕ 14-09-2024ರಂದು ಹಮ್ಮಿಕೊಂಡ ರಾಷ್ಟ್ರೀಯ […]





